- ಸಂಸ್ಥೆಯು ಕಳೆದ 5 ವರ್ಷಗಳಿಂದ ಉಡುಪಿ, ಮಂಗಳೂರು, ಭಟ್ಕಳ, ತೀರ್ಥಹಳ್ಳಿ, ಮಡಿಕೇರಿ ಜಿಲ್ಲೆಯಲ್ಲಿ ವೃತ್ತಿಪರ ಶಿಕ್ಷಣ ಹಾಗೂ ವಿದ್ಯಾರ್ಥಿ ವೇತನದ ಬಗ್ಗೆ ಉಚಿತ ಮಾರ್ಗದರ್ಶನವನ್ನು ನೀಡುತ್ತಿದೆ.
- ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಜನರಲ್ ನರ್ಸಿಂಗ್ ಸೀಟು ಹಾಗೂ ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಶೇ.50% ರಿಯಾಯಿತಿ ದರದಲ್ಲಿ ನರ್ಸಿಂಗ್ ಸೀಟುಗಳನ್ನು ಮಾಡಿಕೊಡಲಾಗುವುದು.
- ಸರ್ಕಾರ ನಡೆಸುವ ವಿದ್ಯಾರ್ಥಿನಿಲಯಗಳಲ್ಲಿ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಉಚಿತ ಊಟ ಹಾಗೂ ವಸತಿ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗುವುದು.
- KSWO ಸಂಸ್ಥೆಯು ಸರಕಾರದಿಂದ ಅನುಮೋದನೆಗೊಂಡಿರುವ ಎಲ್ಲಾ ಜಾತಿಯ ವಿದ್ಯಾರ್ಥಿವೇತನವನ್ನು Online ಮೂಲಕ ಭರ್ತಿ ಮಾಡಿ ಅವರಿಗೆ ಆ ವಿದ್ಯಾರ್ಥಿ ವೇತನ ಸಿಗಲು ಸಹಾಯ ಮಾಡುತ್ತದೆ.
- ಸರ್ಕಾರಿ ವಿದ್ಯಾರ್ಥಿನಿಲಯಗಳಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಊಟ ಹಾಗೂ ವಸತಿಯ ವ್ಯವಸ್ಥೆಯನ್ನು ಸಂಸ್ಥೆಯ ವತಿಯಿಂದ ಮಾಡಿಕೊಡಲಾಗುವುದು.
- ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ Education Loan ( ಸಾಲ) ವ್ಯವಸ್ಥೆಯನ್ನು ಸಂಸ್ಥೆಯ ವತಿಯಿಂದ ಮಾಡಿಕೊಡಲಾಗುವುದು.
- ಈ ಮೇಲ್ಕಂಡ ಎಲ್ಲಾ ಸೇವೆಯನ್ನು ನಮ್ಮ ಸಂಸ್ಥೆಯ ಮೂಲಕ ದಾಖಲಾತಿಗೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುವುದು.